ಬಸವಣ್ಣ   
  ವಚನ - 932     
 
ಆ ಭಸ್ಮ ತಾಗಿ ಬ್ರಹ್ಮ ತನ್ನ ಕಪಾಲವಿಡಿದನು; ಗಣನಾಥನ ಐವತ್ತೆರಡು ಸರ ಹರಿದು ಬಿದ್ದವು! ಆ ಭಸ್ಮ ತಾಗಿ ಅಂಡಜಮುಗ್ಧೆಯ ಮೂರು ಮೊಲೆ ಹರಿದು ಬಿದ್ದುವು; ನಾದಪ್ರಿಯ ನಂದಿಯನೇರಿಕೊಂಡು ಅತೀತನ ಮೇಲೆ ಆನಂದ ಸಿಂಹಾಸನವಿಕ್ಕಿ ಕುಳ್ಳಿತ್ತ; ಕೂಡಲಸಂಗಮದೇವರ ದೇವತ್ವ ಕೆಟ್ಟಿತ್ತು!