ಬಸವಣ್ಣ   
  ವಚನ - 933     
 
ನಾನೊಮ್ಮೆ ಬೇಂಟೆಯ ಹೋದರೆ ಭಸಿತಕ್ಕಾಹುತಿಯನಿಕ್ಕಿಹೆನೆಂದು ಸಾಸಿರದೇಳುನೂರು ವರುಷ ಒಬ್ಬ ರಾಜನ ಕೊಂದೆನು. ಅವನ ಹೆಂಡತಿ ಐವತ್ತೆರಡು ಕಣ್ಣುಳ್ಳವಳು: ಅವಳು ತನ್ನ ಹೂಮುಡಿಯ ಬಿಟ್ಟು ಅತ್ತಾಳು. ಅವಳ ಬಾಯಲ್ಲಿ ಅಜ ಬಿದ್ದ, ಕಂಗಳಲಿ ಧೂಮಕೇತು ಬಿದ್ದ; ಕೂಡಲಸಂಗಮದೇವರ ದೇವತ್ವ ಕೆಟ್ಟಿತ್ತು!