ಬಸವಣ್ಣ   
  ವಚನ - 937     
 
ಜಲವ ನುಂಗಿತ್ತಯ್ಯಾ ಎನ್ನ ಕರವು; ಪತ್ರೆಯ ನುಂಗಿತ್ತಯ್ಯಾ ಎನ್ನ ಶಿಖಿ; ಎನ್ನಯ ಮಂತ್ರ ಭಿನ್ನವಾಯಿತ್ತು! ಇಂತೀ ದ್ವಿವಿಧ ಒಂದಾಗದ ಮುನ್ನ ಕೂಡಲಸಂಗಮದೇವರು ಪೂಜೆಗೊಂಡರು.