ಬಸವಣ್ಣ   
  ವಚನ - 962     
 
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು. ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ? ಕರಸ್ಥಲದ ದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಟೆಗೆರಗಿದಡೆ ನರಕದಲ್ಲಿಕ್ಕುವ ಕೂಡಲಸಂಗಮದೇವ.