ಬಸವಣ್ಣ   
  ವಚನ - 967     
 
ಅಂಗವಿಕಾರವಳಿದು ಸತಿಯ ಸಂಗವರಿಯ ನೋಡ, ದೇಹಗುಣಂಗಳಿಲ್ಲಾಗಿ ನಿರ್ದೇಹಪ್ರಸಾದಿ ನೋಡಯ್ಯಾ, ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ. ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.