ಬಸವಣ್ಣ   
  ವಚನ - 973     
 
ಅಂಧಕಾರವೆಂಬ ಗಹ್ವರದೊಳಗೆ ನಿದ್ರೆಯೆಂಬ ರಾಕ್ಷಸಿ ಗ್ರಹಿಸಿ, ವೀರರ ನಿಗ್ರಹಿಸಿ ನೀರು ಮಾಡಿ, ಧೀರರ ಧೃತಿಗೆಡಿಸಿ, ಶಾಪಾನುಗ್ರಹಸಮರ್ಥರ ಸತ್ತಂತಿರಿಸಿ, ನಿಚ್ಚ ನಿಚ್ಚ ಜೀವನಾಶವ ಮಾಡುತ್ತಿಹಳು ನೋಡಾ, ಕೂಡಲಸಂಗಮದೇವಾ.