ಬಸವಣ್ಣ   
  ವಚನ - 976     
 
ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು, ಅರಿಷಡ್ವರ್ಗಂಗಳು ಹರಿಹಂಚಾದವು, ಅಷ್ಟಮದಂಗಳು ಪಟ್ಟಪರಿಯಾದವು, ದಶವಾಯುಗಳು ವಶವರ್ತಿಯಾದವು, ಇಂದ್ರಿಯಂಗಳು ಬಂಧನವಡೆದವು, ಮನೋವಿಕಾರ ನಿಂದಿತ್ತು. ಕೂಡಲಸಂಗಮದೇವಾ, ನಿಮ್ಮಲ್ಲಿ ನಮ್ಮ ಮಹಾದೇವಿಯಕ್ಕಗಳ ನಿರ್ವಾಣದ ಸಹಜ ನಿಲವ ಕಂಡು, ನಮೋ ನಮೋ ಎನುತಿರ್ದೆನಯ್ಯಾ, ಪ್ರಭುವೆ.