ಬಸವಣ್ಣ   
  ವಚನ - 977     
 
ಅದ್ವೈತವ ಅಂತರಂಗದಲ್ಲಿ ಅರಿದು ಹೊರಗೆ ದಾಸೋಹವ ಮಾಡದಿರ್ದಡೆ ಎಂತಯ್ಯಾ ಉಭಯ ಸಂದೇಹದಲ್ಲಿ ನಿಜವಪ್ಪುದು? ನಿಮ್ಮ ಶರಣರ ಮನ ನೊಂದಲ್ಲಿ ನಾನು ಸೈರಿಸಿಕೊಂಬೆನೆಂತಯ್ಯಾ ? ಕೂಡಲಸಂಗಮದೇವಾ, ಹಾವು ಸಾಯದೆ ಕೋಲು ನೋಯದಂತೆ ಮಾಡಾ, ನಿಮ್ಮ ಧರ್ಮ.