ಬಸವಣ್ಣ   
  ವಚನ - 978     
 
ಅನುದಿನದಲ್ಲಿ ಮಜ್ಜನಕ್ಕೆರೆದು ನೆನೆದು ಲಿಂಗ ಕರಿಗಟ್ಟಿತ್ತು. ನೀರನೊಲ್ಲದು, ಬೋನವ ಬೇಡದು, ಕರೆದಡೆ ಓ ಎನ್ನದು. ಸ್ಥಾವರ ಪೂಜೆ, ಜಂಗಮದ ಉದಾಸೀನ- ಕೂಡಲಸಂಗಯ್ಯನೊಲ್ಲ ನೋಡಾ.