ಬಸವಣ್ಣ   
  ವಚನ - 981     
 
ಅನ್ಯವಿಚಾರವ ಮರೆದು ನಿಮ್ಮ ವಿಚಾರವೆಡೆಗೊಂಡಿತ್ತಾಗಿ, ಪ್ರಾಣದ ನೆಲೆಗೆಟ್ಟಿತ್ತಯ್ಯಾ, ದಶವಾಯುಗಳ ಸಂಚ ತಪ್ಪಿತ್ತಯ್ಯಾ, ಕರಣಂಗಳ ಲಿಂಗಕಿರಣಂಗಳು ನುಂಗಿದವಯ್ಯಾ, ಒಳಗೆ ಕರತಳಾಮಳಕಗೊಂಡೆನಯ್ಯಾ, ಹೊರಗೆ ಅದೆಂತೆಂದರಿಯದೆ ನೀನೆ ಗತಿಯಾಗಿದ್ದೆ, ಕೂಡಲಸಂಗಮದೇವಾ.