ಬಸವಣ್ಣ   
  ವಚನ - 984     
 
ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ, ಎನ್ನ ಮನದಲ್ಲಿ ತನ್ನ ನಿಲವ ತೋರಿದ, ಎನ್ನ ಅರಿವಿನಲ್ಲಿ ನಿಮ್ಮ ತೋರಿದ, ಇಂತೀ ತ್ರಿವಿಧಸ್ವಾಯತವನು ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ. ಕೂಡಲಸಂಗಮದೇವಯ್ಯಾ, ಚೆನ್ನಬಸವಣ್ಣನ ಕರುಣದಿಂದ ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.