ಬಸವಣ್ಣ   
  ವಚನ - 987     
 
ಅಯ್ಯಾ, ಎಳಗರು ತಾಯನರಸಿ ಬಳಲುವಂತೆ ನಾ ನಿಮ್ಮನರಸಿ ಬಳಲುತ್ತಿದ್ದೇನೆ. ಅಯ್ಯಾ, ನೀವೆನ್ನ ಮನಕ್ಕೆ ಪ್ರಸನ್ನವಾಗಿ ಕಾರುಣ್ಯವ ಮಾಡು. ಅಯ್ಯಾ, ನೀವೆನ್ನ ಮನಕ್ಕೆ ನೆಲೆವನೆಯಾಗಿ ಕಾರುಣ್ಯವ ಮಾಡು, ಕಾರುಣ್ಯವ ಮಾಡು. ನೀನಿನಿತು ಲೇಸನೀಯಯ್ಯಾ, ಅಂಬೇ ಅಂಬೇ ಕೂಡಲಸಂಗಮದೇವಾ.