ಬಸವಣ್ಣ   
  ವಚನ - 992     
 
ಅಯ್ಯಾ, ನಿಮ್ಮ ಶರಣರ ಕಂಡ ಕಡುಸುಖವನೇನೆಂಬೆನಯ್ಯಾ? ಅದು ಸಾಲೋಕ್ಯದಂತುಟಲ್ಲ, ಸಾಮೀಪ್ಯದಂತುಟಲ್ಲ, ಸಾರೂಪ್ಯದಂತುಟಲ್ಲ, ಸಾಯುಜ್ಯದಂತುಟಲ್ಲ. ಕೂಡಲಸಂಗಯ್ಯಾ, ನಿಮ್ಮ ಶರಣರ ಚರಣದ ದರುಶನ ಸ್ಪರುಶನದಿಂದಾನು ಧನ್ಯನಾದೆನು.