ಬಸವಣ್ಣ   
  ವಚನ - 998     
 
ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ ರಕ್ಷಿಸಿಹೆವೆಂದಿರಲು, ನಾನು ತೆರಹು-ಮರಹಾಗಿರ್ದು ಕೆಟ್ಟೆನಯ್ಯಾ, ನಾನು ಕೆಟ್ಟ ಕೇಡಿಂಗೆ ಕಡೆಯಿಲ್ಲವಯ್ಯಾ. ಕೂಡಲಸಂಗಮದೇವಾ, ಎನ್ನ ಭಕ್ತಿ ಸಾವಿರ ನೋಂಪಿಯ ನೋಂತು ಹಾದರದಲ್ಲಿ ಅಳಿದಂತಾಯಿತ್ತಯ್ಯಾ.