ಬಸವಣ್ಣ   
  ವಚನ - 1004     
 
ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ, ಮಥನಿಸಿ ತೋರುವರಿಲ್ಲದನ್ನಕ್ಕರ ಕಾಣಬಹುದೆ? ಜಗದೊಳಗೆ ಕೂಡೆ ಪರಿಪೂರ್ಣ ಶಿವನೆಂದಡೆ ಅಂತರಂಗದಲ್ಲಿ ಕಾಣಬಹುದೆ? ಆದಿ ಲಿಂಗ ಅನಾದಿ ಶರಣನ ಭೇದವ ತಿಳುಹಿ, ನಿಜಪ್ರಾಣದೊಳಗಿಪ್ಪ ಸುಜ್ಞಾನಲಿಂಗವ ಕರಸ್ಥಲಕ್ಕೆ ತಂದು, ಆ ಕರಸ್ಥಲದ ಲಿಂಗವನೆನ್ನ ಸರ್ವಾಂಗದೊಳಗೆ ಪ್ರತಿಷ್ಟಿಸಿ ತೋರಿ, ನಿತ್ಯ ನಿಜಲಿಂಗೈಕ್ಯವಹ ಹೊಲಬಿನ ಹರಿಬ ತೋರಿ, ಮರ್ತ್ಯಲೋಕದೊಳಗೆಲ್ಲಾ ಇಂದು ಮೊದಲಾಗಿ ಪ್ರಾಣಲಿಂಗದ ಘನವ ಹರಹಿ ಶಿವಭಕ್ತಿಯನುದ್ಧರಿಸಿದನು. ಕೂಡಲಸಂಗಮದೇವರಲ್ಲಿ, ಚೆನ್ನಬಸವಣ್ಣನೆನ್ನನಾಗುಮಾಡಿ ಉಳುಹಿದನಾಗಿ ಇನ್ನು ಮರ್ತ್ಯಲೋಕಕ್ಕೆ ಬಂದಡೆ ಚೆನ್ನಬಸವಣ್ಣನ ಪಾದದಾಣೆ.