ಬಸವಣ್ಣ   
  ವಚನ - 1005     
 
ಅಯ್ಯಾ, ರುದ್ರಾಕ್ಷಿಯಿಂದ ಹರಿದೆನು ಭವಪಾಶಂಗಳ, ಅಯ್ಯಾ, ರುದ್ರಾಕ್ಷಿಯಿಂದ ಮುರಿದೆನು ತನುಗುಣಾದಿಗಳ, ಅಯ್ಯಾ, ರುದ್ರಾಕ್ಷಿಯಿಂದ ಒರೆಸಿದೆನು ಮಹಾಮಾಯೆಯ, ಅಯ್ಯಾ, ರುದ್ರಾಕ್ಷಿಯಿಂದ ಕಳೆದೆನು ಪಂಚಮಹಾಪಾತಕವ. ಅಯ್ಯಾ ಕೂಡಲಸಂಗಮದೇವಾ, ಶ್ರೀಮಹಾರುದ್ರಾಕ್ಷಿಯಿಂದ ಗೆಲಿದೆನಯ್ಯಾ ಸಕಲದುರಿತಂಗಳನು.