ಬಸವಣ್ಣ   
  ವಚನ - 1017     
 
ಅರಿವಿನರಿತವ ಕೆಡಿಸಿತ್ತು ಬಡತನವೆಂಬ ರಾಹು, ಉಳ್ಳವನ ಉಳುವೆಯ ಕೆಡಿಸಿತ್ತು ಮೋಹವೆಂಬ ರಾಹು, ಕಾಬವನ ಕಾಣಿಕೆಯ ಕೆಡಿಸಿತ್ತು ಕಾಮವೆಂಬ ಕತ್ತಲೆ, ಎನ್ನ ಮನದ ಭಯಕ್ಕಂಜಿ ನಿಮ್ಮ ಮೊರೆಹೊಕ್ಕೆ ಕೂಡಲಸಂಗಮದೇವಾ.