ಬಸವಣ್ಣ   
  ವಚನ - 1051     
 
ಆನು ಮಾಡಿದ ತಪ್ಪನೆಣಿಸಿಹೆನೆಂದಡೆ ಗಣನೆಯಿಲ್ಲ. ನಡೆದು ತಪ್ಪುವೆ, ನುಡಿದು ತಪ್ಪುವೆ, ಮಾಡಿ ತಪ್ಪುವೆ, ನೀಡಿ ತಪ್ಪುವೆ, ಅರಿದು ತಪ್ಪುವೆ, ಮರೆದು ತಪ್ಪುವೆ, ಎನ್ನ ತಪ್ಪನೊಪ್ಪವಮಾಡಿಕೊಂಬುದಲ್ಲದೆ ಚಿತ್ತಕ್ಕೆ ತರಲಾಗದು. ಕೂಡಲಸಂಗಯ್ಯನೆಂಬ ಗಂಡನೆನ್ನ ಬೆರಸಬೇಕೆಂದು ಕರೆಯಲಟ್ಟಿದನು, ಶಿವಶರಣರೆಲ್ಲರಿಗೆ ಶರಣೆಂದು ಬೀಳ್ಕೊಂಬ ತವಕದಲ್ಲಿದ್ದೆನು.