ಬಸವಣ್ಣ   
  ವಚನ - 1053     
 
ಆನೆ, ಭಂಡಾರ, ಲಾಯದ ಕುದುರೆಯ ಬೇಡುವರಿಲ್ಲದೆ ಬಡವಾದೆನಯ್ಯಾ. ಬೇಡುವುದೇನು ದೇವಾ? ಮುನ್ನ ಬೇಡಿದೆ ಸಿಂಧುಬಲ್ಲಾಳನ ವಧುವನು, ಇನ್ನು ಬೇಡಿದಡೆ, ನಿಗಳವನಿಕ್ಕುವೆ. ಬೇಡಿದ ಶರಣರಿಗೆ ನೀಡದಿರ್ದಡೆ ತಲೆದಂಡ ಕೂಡಲಸಂಗಮದೇವಾ.