ಬಸವಣ್ಣ   
  ವಚನ - 1057     
 
ಆಹ್ವಾನವಿಲ್ಲ ಪ್ರಾಣಲಿಂಗವಾಗಿ, ವಿಸರ್ಜನವಿಲ್ಲ ಲಿಂಗ ನೆಲೆಗೊಂಡಿಪ್ಪುದಾಗಿ. ಇದು ಕಾರಣ, ಆಹ್ವಾನ ವಿಸರ್ಜನವಿಲ್ಲ, ಶರಣನ ಪರಿ ಬೇರೆ; ಅಂಗಸಂಗವೆ ಲಿಂಗ, ಲಿಂಗಸಂಗವೆ ಮನ, ಕೂಡಲಸಂಗನ ಶರಣ ಸುಯಿಧಾನಿ.