ಬಸವಣ್ಣ   
  ವಚನ - 1061     
 
ಇನ್ನೇವೆನಿನ್ನೇವೆನಯ್ಯಾ? ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು, ಎನ್ನ ನಿಂದಲ್ಲಿ ನಿಲ್ಲಲೀಯದು, ಎನ್ನ ಕುಳಿತಲ್ಲಿ ಕುಳ್ಳಿರಲೀಯದು, ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ. ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ. ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ. ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ, ಎಂದು ನಿಮ್ಮನೊಡಗೂಡುವೆನಯ್ಯಾ?