ಬಸವಣ್ಣ   
  ವಚನ - 1069     
 
ಉರಿಯೊಳಗಣ ಕರ್ಪುರಕ್ಕೆ ಕರಿಯುಂಟೆ ಅಯ್ಯಾ? ಬಯಲ ಮರೀಚಿಜಲಕ್ಕೆ ಕೆಸರುಂಟೆ? ವಾಯುವನಪ್ಪಿದ ಪರಿಮಳಕ್ಕೆ ನಿರ್ಮಾಲ್ಯವುಂಟೆ? ನೀವು ನೆರೆ ಒಲಿದ ಬಳಿಕ ಎನಗೆ ಭವವುಂಟೆ? ಕೂಡಲಸಂಗಮದೇವಾ, ನಿಮ್ಮ ಚರಣಕಮಲದೊಳಗೆನ್ನನಿಂಬಿಟ್ಟುಕೊಳ್ಳಯ್ಯಾ.