ಬಸವಣ್ಣ   
  ವಚನ - 1071     
 
ಊರಿಗೆ ಹೊಸಬರು ಬಂದರೆ ಪುರದೊಳಗಣ ಶ್ವಾನ ನೋಡಿ ಬಗುಳದೆ ಸುಮ್ಮನೆ ಬಿಡುವುದೆ? ಊರಿಗೆ ಹೊರಗಾದ ಶರಣರು ಊರುಗಳ ಮಧ್ಯದೊಳಿರಲು ದೂಷಕರು ದೂಷಿಸದಿಪ್ಪರೇ ಅಯ್ಯ ? ದೂಷಕರ ಧೂಮಕೇತುಗಳು ನಿಮ್ಮ ಶರಣರು, ಕೂಡಲಸಂಗಮದೇವಾ.