ಬಸವಣ್ಣ   
  ವಚನ - 1081     
 
ಎನ್ನ ಕಾಯಕ್ಕೆ ಕಾಹ ಹೇಳುವರಲ್ಲದೆ, ಮನಕ್ಕೆ ಕಾಹ ಹೇಳುವರಿಲ್ಲಯ್ಯಾ, ಅಣಕದ ಮಿಂಡತನಂಗಳ ನೋಡಿ ಕಂಡೆನವ್ವಾ. ಈತನ ಲೀಲೆಗಂಡಾನು ಬೆರಗಾದೆ. ಕೂಡಲಸಂಗಮದೇವ ಎನ್ನ ಮನಕ್ಕೆ ಕಾಹ ಹೇಳಿದನವ್ವಾ