ಬಸವಣ್ಣ   
  ವಚನ - 1100     
 
ಎನ್ನ ಶಿರ ನಿಮ್ಮ ಚರಣವೊರಸೊರಸಿ ಬೆರಸಿ ಭೇದವಿಲ್ಲಯ್ಯಾ, ಎನ್ನ ಕಾಯದ ಕಪಟ, ಎನ್ನ ಮನದ ವಿಕಾರ, ನಿಮ್ಮ ಅಂಗುಷ್ಠದ ಮೊನೆಯ ಸೋಂಕಲೊಡನೆ ಹರಿದುದು ನೋಡಯ್ಯಾ. ಕೂಡಲಸಂಗಮದೇವಯ್ಯಾ, ನಿಮ್ಮ ಶ್ರೀಪಾದದ ಬೆಳಗ ಕಂಡು ಎನ್ನ ಅಂತರಂಗದ ಕತ್ತಲೆ ಓಡಿತ್ತು.