ಬಸವಣ್ಣ   
  ವಚನ - 1107     
 
ಏರಂಡದ ಬಿತ್ತಿನಂತೆ, ರಸವಾರಿಯಂತೆ, ಪಶುವಿನ ಪಿಸಿತದಲ್ಲಿ ತಲೆದೋರುವ ಅಮೃತದಂತೆ, ಕಾಯವಿಡಿದು ಬಂದಡೆ ನಿನಗಾ ಭಾವವಿಲ್ಲ. ಕೂಡಲಸಂಗಮದೇವರಲ್ಲಿ ಪ್ರಭುದೇವರ ಸುಳುಹು ಅಗಮ್ಯವಾಯಿತ್ತು.