ಬಸವಣ್ಣ   
  ವಚನ - 1109     
 
ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ, ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ. ಅಯ್ಯಾ, ನಮ್ಮಯ್ಯನ ಕೈನೊಂದಿತು, ತೆಗೆದು ಕೊಡಾ ಎಲೆ ಚಂಡಾಲಗಿತ್ತಿ, ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ ಕೂಡಲಸಂಗಮದೇವನಲ್ಲದೆ ಆರೂ ಇಲ್ಲ.