ಬಸವಣ್ಣ   
  ವಚನ - 1111     
 
ಒಡಲುಗೊಂಡು ಹುಟ್ಟಿದ ಘಟಕ್ಕೆ ಅಷ್ಟೋತ್ತರಶತವ್ಯಾಧಿ. ಅದಕ್ಕೆ ನಾನಾ ಔಷಧಿಯ ತಂದು ಹೊರೆವರು, ಆ ಪರಿಯ ನಾನದ ಹೊರೆಯೆನು. ಅದೇನು ಕಾರಣವೆಂದೆಡೆ : ಭವರೋಗವೈದ್ಯ, ಭವಹರನೆಂಬ ಬಿರಿದು ನಿಮ್ಮದಾಗಿ. ಇದು ಕಾರಣ ಕೂಡಲಸಂಗಮದೇವಾ, ನಿಮ್ಮ ಪುರಾತನರ ಪ್ರಸಾದವಲ್ಲದೆ ಕೊಂಡಡೆ ನಿಮ್ಮಾಣೆ.