ಬಸವಣ್ಣ   
  ವಚನ - 1120     
 
ಕಂಗಳಲ್ಲಿ ಕರಸ್ಥಳದ ನೋಟ, ಅಂಗವಿಕಾರವೆಂಬುದನರಿಯ ನೋಡಾ, ಮನದ ಕೊನೆಯ ಮೊನೆಯ ಮೇಲಣ ಅನುಭಾವ ಗಮನಗೆಟ್ಟು, ಭಾವ ನಿರ್ಭಾವವೆಂಬುದನರಿಯ, ನೋಡಾ. ಕೂಡಲಸಂಗಮದೇವರಲ್ಲಿ ಪ್ರಭುದೇವರಿಂದಲಾನು ಬದುಕಿದೆನು ಕಾಣಾ, ಚೆನ್ನಬಸವಣ್ಣಾ.