ಬಸವಣ್ಣ   
  ವಚನ - 1125     
 
ಕಂಡಮಂಡಗೆ ಬೆಲ್ಲ ದ್ರಾಕ್ಷೆ ಸಕ್ಕರೆ, ಸರಿಭಾಗವಾದ ಹೊಸ ಹೆಸರ ಭಕ್ಷ್ಯ ಪನ್ನಿರ್ಖಂಡುಗ, ಸುಲಿಗಡಲೆಯ ಕಜ್ಜಾಯ ಹದಿನೆಂಟು ಖಂಡುಗ, ಅಕಾಲ ಮಾವಿನಹಣ್ಣು ಇಪ್ಪತ್ತುನಾಲ್ಕು ಲಕ್ಷ, ಕಡೆಯಿಲ್ಲದ ಕದಳೀಫಲ, ಚಾರಬೀಜ ಎಂಬತ್ತು ಖಂಡುಗ, ತವರಾಜ ಹೆತ್ತುಪ್ಪ, ಹಲಸಿನ ಹಣ್ಣು ಮನ ಮೇರೆ, ಹಾಲಕೆನೆ ಹದಿನೆಂಟು ಖಂಡುಗ, ಉತ್ತತ್ತಿ, ಚಿಲುಪಾಲಘಟ್ಟಿ ಕಟ್ಟಣೆಯಿಲ್ಲ. ಮನವೊಲಿದ ಕಜ್ಜಾಯವನಾರೋಗಣೆಯ ಮಾಡು ದೇವಾ, ಕೂಡಲಸಂಗಮದೇವಾ.