ಬಸವಣ್ಣ   
  ವಚನ - 1133     
 
ಕಬ್ಬಿನ ಮೇಲೆ ಜೇನಿಟ್ಟಿತ್ತೆಂಬರು, ಅವು ಒಂದರ ಸಿಹಿಯನೊಂದರಿಯವು. ಭಕ್ತ ಜಂಗಮದ ನಡುವೆ ಅರ್ಥಪ್ರಾಣ ಅಭಿಮಾನವೆಂಬ ಸಿಗುರು ಕಾಡಿತ್ತು ಕಾಣಾ, ಕೂಡಲಸಂಗಮದೇವಾ.