ಬಸವಣ್ಣ   
  ವಚನ - 1135     
 
ಕರ್ತನಟ್ಟಿದಡೆ ಮರ್ತ್ಯದಲ್ಲಿ ಮಹಾಮನೆಯ ಕಟ್ಟಿದೆ, ಸತ್ಯಶರಣರಿಗೆ ತೊತ್ತು ಭೃತ್ಯನಾಗಿ ಸವೆದು ಬದುಕಿದೆನು. ಕರ್ತನ ಬೆಸನು ಮತ್ತೆ ಬರಲೆಂದಟ್ಟಿದಡೆ, ಕೂಡಲಸಂಗಮದೇವರ ನಿರೂಪಕ್ಕೆ ಮಹಾಪ್ರಸಾದವೆಂದೆನು.