ಬಸವಣ್ಣ   
  ವಚನ - 1136     
 
ಕಲ್ಪಿತವ ಕಳೆದ, ಅಕಲ್ಪಿತವ ತಿಳುಹಿದ, ಮನವ ಮಾಣಿಸಿ ಘನವ ನೆಲೆಗೊಳಿಸಿದ. ತನುವ ಕೆಡಿಸಿ, ಅನುವ ಸ್ಥಾಪ್ಯವ ಮಾಡಿ, ಅಂತರಂಗದಲ್ಲಿ ಮಹಾಜ್ಞಾನವ ತುಂಬಿದ, ಬಹಿರಂಗದಲ್ಲಿ ಸದಾಚಾರವ ನೆಲೆಗೊಳಿಸಿದ. ನಿಮ್ಮ ನಿಲವನೆನಗೆ ಒರೆದೊರೆದು ಹೇಳಿ ತೋರಿಸಿ, ಎನ್ನ ನಿಮ್ಮ ಶ್ರೀಪಾದಕ್ಕೆ ಯೋಗ್ಯನ ಮಾಡಿದ. ಕೂಡಲಸಂಗಮದೇವಯ್ಯಾ, ನಿಮ್ಮ ಮಹಾಮನೆಯಲ್ಲಿ ಮಡಿವಾಳನೂ ನಾನೂ ಕೂಡಿ ಸುಖದಲ್ಲಿ ಇದ್ದೆವಯ್ಯಾ.