ಬಸವಣ್ಣ   
  ವಚನ - 1147     
 
ಕಾಲದಿಂದ ಕಡೆಮುಟ್ಟ ಮಾಡಿದ ಲೇಸು ಒಂದು ದಿನ ಉದಾಸೀನವ ಮಾಡಿದಡೆ ಅದೆಲ್ಲವು ವ್ಯರ್ಥವಾಗಿ ಹೋಹುದು ಕೇಳಯ್ಯಾ. ಸಾವಿರ ನೋಂಪಿಯ ನೋಂತು, ಒಂದು ಬಾರಿ ಹಾದರವನಾಡಿದಡೆ ಆ ನೋಂಪಿಯೆಲ್ಲವು ನೀರಲ್ಲಿ ನೆರೆದು ಹೋಹಂತೆ ಕೇಳಯ್ಯಾ. ನಾನು ಎಷ್ಟು ಭಕ್ತಿಯ ಮಾಡಿದಡೇನು, ನಿಮ್ಮ ಶರಣರ ಮನವೆಳ್ಳನಿತು ನೊಂದಡೆ, ಎನ್ನ ಭಕ್ತಿಯಭಿಮಾನ ಹೋಯಿತ್ತಯ್ಯಾ. ಕೂಡಲಸಂಗಮದೇವಾ, ನಿಮ್ಮ ಶರಣರ ಮುನಿಸನಾವಪರಿಯಲ್ಲಿ ತಿಳುಹುವೆ ಹೇಳಾ, ಎಲೆ ಪ್ರಭುವೆ.