ಬಸವಣ್ಣ   
  ವಚನ - 1167     
 
ಕ್ರಿಯಾಚಾರವಿಲ್ಲದ ಗುರುವಿನ ಕೈಯಿಂದ ದೀಕ್ಷೆ, ಉಪದೇಶವ ಕೊಳ್ಳಲಾಗದು. ಕ್ರಿಯಾಚಾರವಿಲ್ಲದ ಶಿಲೆಯ ಲಿಂಗವೆಂದು ಪೂಜಿಸಲಾಗದು. ಕ್ರಿಯಾಚಾರವಿಲ್ಲದ ಭೂತಪ್ರಾಣಿಗಳಲ್ಲಿ ಜಂಗಮವೆಂದು ಪಾದೋದಕ ಪ್ರಸಾದವ ಕೊಳಲಾಗದು. ಇಂತಪ್ಪ ಆಚಾರವಿಲ್ಲದ, ಅನಾಚಾರವ ಬಳಸುವ ದುರಾಚಾರಿಗಳಲ್ಲಿ ಉಪದೇಶವ ಹಡೆದು, ಪಾದೋದಕಪ್ರಸಾದವ ಕೊಂಡವಂಗೆ ಅಘನಾಸ್ತಿಯಾಗದು, ಮುಂದೆ ಅಘೋರ ನರಕ ತಪ್ಪದು ಕಾಣಾ, ಕೂಡಲಸಂಗಮದೇವಾ.