ಬಸವಣ್ಣ   
  ವಚನ - 1170     
 
ಗಿರಿಯ ಶಿಖರದ ಮೇಲೆ ಕುಳಿತುಕೊಂಡು, ಜಡೆಯನೇರಿಸಿಕೊಂಡು, ಹುತ್ತೇರಿ ಹಾವು ಸುತ್ತಿರ್ದಡೇನಯ್ಯಾ? ಕೃತಯುಗ ತ್ರೇತಾಯುಗ ದ್ವಾಪರ ಕಲಿಯುಗದೊಡನೊಡನೆ ಸವೆದ ಪಾಷಾಣ ! ನಮ್ಮ ಕೂಡಲಸಂಗನ ಶರಣರ ಪ್ರಸಾದಜೀವಿಗಳಲ್ಲದವರು ಏಸು ಕಾಲವಿರ್ದಡೇನು? ಅದರಂತು ಕಾಣಿರಣ್ಣಾ.