ಬಸವಣ್ಣ   
  ವಚನ - 1173     
 
ಗುರು ಮುಂತಾಗಿ ಕೊಂಡುದು ಪ್ರಸಾದವಲ್ಲ, ಲಿಂಗ ಮುಂತಾಗಿ ಕೊಂಡುದು ಪ್ರಸಾದವಲ್ಲ, ಜಂಗಮ ಮುಂತಾಗಿ ಕೊಂಡುದು ಪ್ರಸಾದವಲ್ಲ, ಪ್ರಸಾದ ಮುಂತಾಗಿ ಕೊಂಡುದು ಪ್ರಸಾದವಲ್ಲ, ಅಂತಪ್ಪ ಪ್ರಸಾದವೆ ಬೇಕು. ಅಂತಪ್ಪ ಪ್ರಸಾದವ ತೋರಿ ಬದುಕಿಸಯ್ಯಾ, ಕೂಡಲಸಂಗಮದೇವಾ.