ಬಸವಣ್ಣ   
  ವಚನ - 1179     
 
ಗುರುವಿಂಗೆ ನೀನೆ ಕರ್ತ, ಲಿಂಗಕ್ಕೆ ನೀನೆ ಕರ್ತ, ಜಂಗಮಕ್ಕೆ ನೀನೆ ಕರ್ತ, ಪ್ರಸಾದಕ್ಕೆ ನೀನೆ ಕರ್ತ, ಉಪದೇಶಕ್ಕೆ ನೀನೆ ಕರ್ತ. ಕೂಡಲಸಂಗಮದೇವರು ಸಾಕ್ಷಿಯಾಗಿ, ಎನಗೆಯೂ ನೀನೆ ಕರ್ತನಾದ ಕಾರಣ, ನಾನು ಬೇಕೆನಲಮ್ಮೆ ಬೇಡೆನಲಮ್ಮೆ ಕಾಣಾ, ಚೆನ್ನಬಸವಣ್ಣಾ.