ಬಸವಣ್ಣ   
  ವಚನ - 1188     
 
ಚಿನ್ಮಯ ಚಿತ್ಪ್ರಕಾಶ ಚಿದಾನಂದ ಲಿಂಗವೆ, ಎನ್ನ ಹೃದಯಕಮಲದಲ್ಲಿ ಬೆಳಗಿ ತೋರುವ ಪರಂಜ್ಯೋತಿ, ಎನ್ನ ಕರಸ್ಥಲಕ್ಕನುವಾದ ಧರ್ಮಿ, ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಗೊಂಡಿಪ್ಪೆಯಯ್ಯಾ, ಕೂಡಲಸಂಗಮದೇವಯ್ಯಾ.