ಬಸವಣ್ಣ   
  ವಚನ - 1192     
 
ಜಂಗಮವೆ ತನ್ನ ಪ್ರಾಣಲಿಂಗವೆಂದರಿದ ಸದ್ಭಕ್ತಂಗೆ ಜಂಗಮದ ಪ್ರಸಾದವಿಲ್ಲದೆ ಲಿಂಗಪ್ರಸಾದವ ಕೊಳಲಾಗದು, ಜಂಗಮದ ಪ್ರಸಾದವು ಲಿಂಗಕ್ಕೆ ಸಲ್ಲದೆಂದು ಶಂಕಿಸಲಾಗದು. ಅದೆಂತೆಂದಡೆ, ವೀರಾಗಮದಲ್ಲಿ; ʼಜಂಗಮಾದಿಗುರೂಣಾಂ ಚ ಅನಾದಿ ಸ್ವಯಲಿಂಗವತ್ 'ಆದಿಪ್ರಸಾದವಿರೋಧೇ ಇಷ್ಟೋಚ್ಛಿಷ್ಟಂ ತು ಕಿಲ್ಬಿಷಂ' ಎಂದುದಾಗಿ ಪ್ರಾಣ ಭಾವದಲ್ಲಿ ಸಂಬಂಧವಾಗಿ ಇಷ್ಟಕ್ಕೂ ಸಂದಿತ್ತು. ಈ ಭೇದವನರಿದು ಜಂಗಮದ ಪ್ರಸಾದವಿಲ್ಲದೆ ಲಿಂಗದ ಪ್ರಸಾದವ ಕೊಳಲಾಗದು ವೀರಮಾಹೇಶ್ವರರು, ಕೂಡಲಸಂಗಮದೇವಾ.