ಬಸವಣ್ಣ   
  ವಚನ - 1201     
 
ತನುಮುಟ್ಟಿದ ಭಕ್ತಿಗೆ ತನುವೆ ಅರ್ಪಿತ, ಮನಮುಟ್ಟಿದ ಭಕ್ತಿಗೆ ಮನವೆ ಅರ್ಪಿತವಯ್ಯಾ, ಎನ್ನ ತನುಮನವೆರಡು ನಿಮ್ಮ ಚರಣಕ್ಕೆ ವೇದ್ಯ ನೋಡಯ್ಯ. ಅದೆಂತೆಂದಡೆ; 'ದೀರ್ಘದಂಡನಮಸ್ಕಾರಂ ನಿರ್ಲಜ್ಜೋ ಗುರುಸನ್ನಿಧೌ ಶರೀರಮರ್ಥಪ್ರಾಣಮ್ ಚ ಸದ್ಗುರುಭ್ಯೋ ನಿವೇದಯೇತ್' ಎಂದುದಾಗಿ ತ್ರಾಹಿ ತ್ರಾಹಿ ಶರಣಾರ್ಥಿ ಶರಣಾರ್ಥಿ ನೀವೆ ಬಲ್ಲಿರಿ, ಕೂಡಲಸಂಗಮದೇವಪ್ರಭುವೆ.