ಬಸವಣ್ಣ   
  ವಚನ - 1215     
 
ತ್ರಿವಿಧವನಿತ್ತು, ರೂಹು ಮಾತು ಬಳಿಕುಂಟೆ ಅಯ್ಯಾ? ತನುವ ಕೊಡೆನಾಗಿ ಇದಿರುತ್ತರವಿದೆ, ಮನವ ಕೊಡೆನಾಗಿ ಆನೆಂಬಹಂಕಾರವಿದೆ, ಧನವ ಕೊಡೆನಾಗಿ ಪ್ರಪಂಚಿನ ಬಳಕೆಯಿದೆ. ಕೂಡಲಸಂಗಮದೇವಯ್ಯಾ, ಎಂತು ಭಕ್ತನಪ್ಪೆನು ?