ಬಸವಣ್ಣ   
  ವಚನ - 1229     
 
ಧನ ಹೋಯಿತ್ತೆಂದಡೆ, ಮನಸು ಬೆದರಿದಡೆ, ಚಿತ್ತ ಹೆದರಿದಡೆ, ತನು ತೆರಳಿದಡೆ, ಭಾವ ಓಸರಿಸಿದಡೆ, ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ತನುಮನಧನವನಲ್ಲಾಡಿಸಿ ನೋಡುವ ಒಡೆಯನು ನೀನೆ, ಹರಣದ ಮೇಲೆತ್ತಡೆ ಕಳವಳವೆ, ಕೂಡಲಸಂಗಮದೇವಾ?