ಬಸವಣ್ಣ   
  ವಚನ - 1231     
 
ಧರೆ ರಸಾತಳಕ್ಕಿಳಿವಂದು, ಹರಿಬ್ರಹ್ಮಾದಿಗಳಳಿವಂದು, ಮಹಾದೇವ ಮಹಾದೇವ ಎನುತ್ತಿರ್ದೆನು. ಅದೆಂತೆಂದಡೆ; 'ಬ್ರಹ್ಮಾಂಡಾನಾಮಸಂಖ್ಯಾನಾಂ ಬ್ರಹ್ಮವಿಷ್ಣು ಮಹಾತ್ಮ ನಃ ಯತ್ರೋದಯಂ ಲಯಂ ಯಾಂತಿ ಮಹಾದೇವ ಇತಿ ಸ್ಮೈತಃ' ಎಂದುದಾಗಿ ಅಗ್ರದ ಕೊನೆಯ ತುದಿಯಿಂದತ್ತತ್ತ ತತ್ತ್ವಮಸಿಯ ಮೀರಿದ ನಮ್ಮ ಕೂಡಲಸಂಗಮದೇವ.