ಬಸವಣ್ಣ   
  ವಚನ - 1235     
 
ನಚ್ಚು ಮಚ್ಚಿನ ಶರಣರೆನ್ನ ಕಣ್ಣಮುಂದೆ ಬಂದು ನಿಂದಿರಲು ಎನ್ನ ತನುವ ಬಗಿದು ಎನ್ನ ತನುವಿನೊಳಗಿಂಬಿಟ್ಟುಕೊಂಬೆನು, ಎನ್ನ ಮನವ ಬಗಿದು ಎನ್ನ ಮನದೊಳಗಿಂಬಿಟ್ಟುಕೊಂಬೆನು, ಎನ್ನ ಕಂಗಳ ಬಗಿದು ಎನ್ನ ಕಂಗಳೊಳಗಿಂಬಿಟ್ಟುಕೊಂಬೆನು. ಕೂಡಲಸಂಗನ ಶರಣರೆನ್ನ ಒಡೆಯರಾಗಿ ಎನ್ನ ಭಾವಕ್ಕೆ ಬಂದ ಭಕ್ತಿಯ ಮಾಡುವೆನು.