ಬಸವಣ್ಣ   
  ವಚನ - 1236     
 
ನಡುದೊರೆಯೊಳಗೆ ಹರುಗೋಲನಿಳಿದಂತಾಯಿತ್ತೆನ್ನ ಭಕ್ತಿ, ಮರನನೇರಿ ಕೈಯ ಬಿಟ್ಟಂತಾಯಿತ್ತೆನ್ನ ಭಕ್ತಿ. ಶಿವಶಿವಾ, ಕೆಟ್ಟೆನಲ್ಲಾ ಗುರುವೆ, ಕೂಡಲಸಂಗಮದೇವಾ, ಈ ಮರುಳಶಂಕರದೇವರ ಕೃಪೆ ಎನಗಿನ್ನೆಂದಪ್ಪುದು ಹೇಳಾ, ಪ್ರಭುವೆ.