ಬಸವಣ್ಣ   
  ವಚನ - 1245     
 
ನಾನೊಂದು ಕಾರಣ ಮರ್ತ್ಯಕ್ಕೆ ಬಂದೆನು, ಬಂದ ಬಳಲಿಕೆಯ ಪರಿಹರಿಸಲಿಕ್ಕೆ ಚೆನ್ನಬಸವಣ್ಣ ಬಂದನು, ಇನ್ನು ಬಾರದಂತೆ ಪ್ರಭುದೇವರು ಬಂದರು, ಇದಕ್ಕೆ ಆಜ್ಞಾಕರ್ತೃ ಮಡಿವಾಳ ಮಾಚಿತಂದೆ ಬಂದನು. ನಾನಿನ್ನಾರಿಗಂಜೆನು, ಬದುಕಿದೆನು ಕಾಣಾ ಕೂಡಲಸಂಗಮದೇವಾ.