ಬಸವಣ್ಣ   
  ವಚನ - 1249     
 
ನಿತ್ಯನಿರಂಜನ ಪರಂಜ್ಯೋತಿವಸ್ತು: ಉಪದೇಶವ ಕೊಟ್ಟು ಗುರುವಾದ, ಕರಸ್ಥಲಕ್ಕೆ ಬಂದು ಲಿಂಗವಾದ, ಹಸರವಾದ ಪ್ರಪಂಚನಳಿದು ದಾಸೋಹವ ಮಾಡಿಸಿಕೊಂಡು ಜಂಗಮವಾದ, ಇಂತೀ ಗುರುಲಿಂಗಜಂಗಮ ಒಂದೆಯಲ್ಲದೆ ಭಿನ್ನವಿಲ್ಲ. ಈ ಮೂರಕ್ಕೆ ಮೂರನಿತ್ತು ಮೂರನೊಂದ ಮಾಡಬಲ್ಲಡೆ, ಆತ ಪ್ರಸಾದಕಾಯನಯ್ಯಾ, ಕೂಡಲಸಂಗಮದೇವಾ.