ಬಸವಣ್ಣ   
  ವಚನ - 1272     
 
ಪ್ರಾಣಲಿಂಗ ಪ್ರವೇಶಿತನಾಗಿ ಪ್ರಸಾದದಲ್ಲಿ ಸನ್ನಿಹಿತನಯ್ಯಾ, ಲಿಂಗಾರ್ಪಿತವಲ್ಲದೆ ಅನರ್ಪಿತವ ಮುಟ್ಟಲೀಯನಯ್ಯಾ, ಅಂಗಗುಣಂಗಳೆಲ್ಲವನತಿಗಳೆದು ಪ್ರಸಾದದಲ್ಲಿ ಬ್ರಹ್ಮಚಾರಿಯಾದನು ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.