ಬಸವಣ್ಣ   
  ವಚನ - 1291     
 
ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟೆಯ ಹತ್ತುವ ವ್ಯರ್ಥರ ಕಂಡು ಎನ್ನ ಮನ ನಾಚಿತ್ತು, ನಾಚಿತ್ತು. ಕೈಲಾಸವೆಂಬುದೇನೊ, ಪೃಥ್ವಿಯ ಮೇಲೊಂದು ಮೊರಡಿ, ಆ ಪೃಥ್ವಿಗೆ ಲಯವುಂಟು, ಆ ಮೊರಡಿಗೆಯು ಲಯವುಂಟು, ಅಲ್ಲಿರ್ಪ ಗಂಗೆವಾಳುಕಸಮರುದ್ರರಿಗೂ ಲಯವುಂಟು, ಇದು ಕಾರಣ, `ಯದ್ಧೃಷ್ಟಂ ತನ್ನಷ್ಟಂ' ಎಂಬ ಶ್ರುತಿಯ ನೋಡಿ ತಿಳಿದು, ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ ಕೂಡಲಸಂಗಾ, ನಿಮ್ಮ ಶರಣ.